ರಾಮ ನವಮಿಯಂದು ಮಜ್ಜಿಗೆ,ಪಾನಕ ಸೇವಿಸಿ 45 ಜನರು ಅಸ್ವಸ್ಥ

Ravi Talawar
WhatsApp Group Join Now
Telegram Group Join Now

ತುಮಕೂರು, ಏ.18: ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್  ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಸುಬ್ರಹ್ಮಣ್ಯ ದೇಗುಲದಲ್ಲಿ ನಿನ್ನೆ(ಏ.17) ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

 

 

WhatsApp Group Join Now
Telegram Group Join Now
Share This Article