ಅಳತೆಗೆ ತಕ್ಕ ಹಾಗೆ ಪಡಗಳನ್ನು ಕಡೆಯಲು ಸೂಚನೆ : ಎಡಿಪಿಸಿ ಕಿರಣಕುಮಾರ ಎಸ್.ಎಚ್

Ravi Talawar
WhatsApp Group Join Now
Telegram Group Join Now

ಗದಗ,ಏಪ್ರಿಲ್​ 08: ಮನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದ್ದು, ಪ್ರತಿಯೊಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿವಸ ಕೂಲಿ ಕೆಲಸವನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ ಈ ಹಿನ್ನೆಲೆ ಅಳತೆಗೆ ತಕ್ಕ ಹಾಕೆ ಪಡ ಕಡೆಯುವದು, ಕಡಿಸುವದು ನಿಮ್ಮ ಕರ್ತವ್ಯ ಅಂತಾ ಜಿಲ್ಲಾ ಪಂಚಾಯತ ಎಡಿಪಿಸಿ ಕಿರಣಕುಮಾರ ಸೂಚನೆ ನೀಡಿದರು..

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದ ಮನರೇಗಾ ಯೋಜನೆಯಡಿ ನಡೆದ ಸಾಮೂಹಿಕ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಜಿಲ್ಲೆಯ ಎಲ್ಲೆಡೆ ಆಯುಕ್ತಾಲಯದ ನಿರ್ದೇಶನ ದಂತೆ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ” ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ” ಅಭಿಯಾನ  ಹಮ್ಮಿಕೊಂಡಿದ್ದು ಮೇ ಅಂತ್ಯದವರೆಗೆ ಅಭಿಯಾನ ಇರುತ್ತದೆ. ನಿಮ್ಮ ಗ್ರಾಮದ ಜನರು ಇದರ ಸದುಪಯೋಗ ಪಡಿಸಿಕೊಳ್ಳಲು ಹೇಳಿದರು

ಅಲ್ಲದೆ ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆ ಗ್ರಾಮ ಪಂಚಾಯತಿ ಮಾಡಿದೆ. ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆ ತರಬಾರದು ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ನಮ್ಮ ಗ್ರಾಮ ಪಂಚಾಯತಿ ಯಿಂದ ಕೂಸಿನ ಮನೆ ಆರಂಭಮಾಡಿದ್ದು,ತಾವುಗಳು ತಮ್ಮ ಮಕ್ಕಳನ್ನು ಅಲ್ಲಿ0iÉುೀ ಬಿಟ್ಟು ಕೆಲಸಕ್ಕೆ ಹೋಗಲು ಅವಕಾಶವಿದ್ದು ಇದರಿಂದ ಪಾಲಕರಿಬ್ಬರು ಯೋಜನೆಯಡಿ ಕೆಲಸಕ್ಕೆ ತೆರಳಿದಾಗ ಮಕ್ಕಳ ಲಾಲನೆ ಪಾಲನೆ  ಕೊರತೆ ನೀಗಿದಂತಾಗಿದೆ ಇದರಿಂದ ಯೋಜನೆಯಡಿ ಹೆಚ್ಚಿನ ಜನರು ಪಾಲ್ಗೊಂಡು ಪ್ರತಿಯೊಬ್ಬರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.

ಮತದಾನ ಜಾಗೃತಿ : ದೇಶದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವದನ್ನು ಮರೆಯಬೇಡಿ ಕಡ್ಡಾಯವಾಗಿ ಮತದಾನ ಮಾಡಿ ಮತದಾನ ನಿಮ್ಮ ಹಕ್ಕು ಹೌದು, ಕರ್ತವ್ಯವು ಆಗಿದೆ ಈ ಹಿನ್ನೆಲೆ ಕಡ್ಡಾಯವಾಗಿ ಮತದಾನ ಮಾಡಿ ಅಂತಾ ಕೂಲಿ ಕಾರ್ಮಿಕರಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು..

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಪ್ರಕಾಶ, ತಾಂತ್ರಿಕ ಸಹಾಯಕ ಪ್ರದೀಪ ನರೆಗಲ್ ,ಗ್ರಾಮ ಕಾಯಕ ಮಿತ್ರ,ನರೇಗಾ ಕೂಲಿ ಕಾರ್ಮಿಕರು,ಮೇಟಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article