ಮೇ 5ರ ನಂತರ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ!

Ravi Talawar
WhatsApp Group Join Now
Telegram Group Join Now

ಬೆಂಗಳೂರು, 05: ರಾಜ್ಯದಲ್ಲಿ ಶುಕ್ರವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಇದರ ನಡುವೆಯೇ, ಮೇ 3 ರಾತ್ರಿಯಿಂದ 4ರ ರಾತ್ರಿಯವರೆಗಿನ ಅವಧಿಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಗುರದಿಂದ ಉತ್ತಮ ಮಳೆಯಾಗಿದೆ.

ಮೇ 5ರ ನಂತರ, ಕೊಡಗು, ಮೈಸೂರು, ಚಾಮರಾಜ ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಕೆಲವೆಡೆ ಭಾನುವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಮೇ 6ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಕೆಲವೆಡೆ ಹಗುರ ಮಳೆ ಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಉಳಿದಂತೆ ಬೀದರ್‌, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಿಸಿ ಗಾಳಿಯ ವಾತಾವರಣ ಹೆಚ್ಚಾಗಿರುತ್ತದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿಒಣ ಹವೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Share This Article