ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ: ಉಮ್ಮಳಿಸಿ ಅತ್ತ ಹೆಚ್​ಡಿ ರೇವಣ್ಣ  

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಮೇ 05: ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾಗಿರುವ ಸಂತ್ರಸ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ಡಿ ರೇವಣ್ಣ  ಅವರನ್ನು ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ನ್ಯಾಯಾಧೀಶರ ನಿವಾಸಕ್ಕೆ ತೆರಳುವ ಮುನ್ನ ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಎಸ್​​ಐಟಿ ಅಧಿಕಾರಿಗಳ ಮುಂದೆ, “ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ” ಎಂದು ಕಣ್ಣೀರಿಟ್ಟಿದ್ದಾರೆ.

ನನಗ್ಯಾಕೆ ಹೀಗೆ ಮಾಡುತ್ತಿದ್ದೀರಾ? ರಾಜಕೀಯ ಪ್ರೇರಿತವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ನಾನು ಯಾರಿಗೂ ಅನ್ಯಾಯ ಮಾಡಿದವನಲ್ಲ. ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಅಂತ ಎಸ್​​​ಐಟಿ ಅಧಿಕಾರಿಗಳ ಎದುರು ಕಣ್ಣೀರಿಟ್ಟಿದ್ದಾರೆ. ಈ ವೇಳೆ ಎಸ್​ಐಟಿ ಅಧಿಕಾರಿಗಳು ಹೆಚ್​​ಡಿ ರೇವಣ್ಣ ಅವರಿಗೆ ನೀರು ಕೊಟ್ಟು ಸಮಾಧಾನಪಡಿಸಿದರು.

ಮಹಿಳೆ ಅಪಹರಣ ಆಗಿದ್ದಾಗ ನಾನು ಬೆಂಗಳೂರಿನಲ್ಲಿದ್ದೆ. ನನ್ನ ತಂದೆ, ಮಾಜಿ ಹೆಚ್​​ ದೇವೇಗೌಡರನ್ನು ಮಾತನಾಡಿಸಲು ಬಂದು ಕೂತಿದ್ದೆ. ದೇವೇಗೌಡರ ಮನೆಯಲ್ಲಿ ಇದ್ದಾಗಲೇ ನನ್ನನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದರು.

 

WhatsApp Group Join Now
Telegram Group Join Now
Share This Article