ಕಾಂಗ್ರೇಸ್ ಪಕ್ಷದ ಆಡಳಿತ ಸಂಪೂರ್ಣ ಕುಸಿದಿದೆ: ಬಿಜೆಪಿ ವಕ್ತಾರ ಎಂ.ಎಂ.ಹಿರೇಮಠ

Ravi Talawar
WhatsApp Group Join Now
Telegram Group Join Now

ಗದಗ,18: ಕರ್ನಾಟಕ ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಪಕ್ಷದ ಆಡಳಿತ ಸಂಪೂರ್ಣ ಕುಸಿದಿದ್ದು ನಾವು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರಾಜು ಕುರಡಗಿ ಹಾಗು ಜಿಲ್ಲಾ ವಕ್ತಾರರಾದ ಎಂ.ಎಂ.ಹಿರೇಮಠರವರು ರಾಹುಲ್ ಗಾಂಧಿಯವರಿಗೆ ಒತ್ತಾಯಿಸಿದ್ದಾರೆ.

ಅವರಿಂದು ಪಕ್ಷದ ಕಾರ್ಯಾಲಯದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೇಸ್ ರಚನೆಯಾಗಿ ೧೧ ತಿಂಗಳು ಕಳೆದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಚಾಲನೆಗೆ ಬಂದಿಲ್ಲಾ ಉತ್ತರ ಕೊಡಿ, ಆರ್ಥಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಇದಕ್ಕೆ
ಉತ್ತರ ಕೊಡಿ, ವರ್ಗಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ.

ನೀವ್ಯಾಕೆ ಸುಮ್ಮನಿದ್ದಿರಿ ಉತ್ತರ ಕೊಡಿ, ರಾಜ್ಯದಲ್ಲಿ ೬೯೨ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇದರ ಬಗ್ಗೆ ಸರ್ಕಾರಕ್ಕೆ ತರಾಟೆ ತೆಗೆದುಕೊಳ್ಳುತ್ತೀರಾ?, ರಾಜ್ಯದ ರೈತರಿಗೆ ದ್ರೋಹ ಬಗೆದು ತಮಿಳನಾಡಿಗೆ ನೀರು ಬಿಟ್ಟಿದ್ದನ್ನು ಖಂಡಿಸುತ್ತೀರಾ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಇದಕ್ಕೆ ಹೊಣೆ ಹೊರುತ್ತಿರಾ?,

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ ಮಹಿಳೆಯರ ರಕ್ಷಣೆಗೆ ಯಾರು ಹೊಣೆ?, ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ್ದು ಖಂಡಿಸುವಿರಾ?, ಗುತ್ತಿಗೆದಾರ ಕೆಂಪಣ್ಣ ಸರ್ಕಾರ ೬೦% ಕಮಿಷನ್ ಆರೋಪ ಮಾಡುತ್ತಿದ್ದಾರೆ ತಪ್ಪಿತಸ್ಥ ಸಚಿವರ ಮೇಲೆ ಕ್ರಮ ಜರುಗಿಸುವಿರಾ?, ಬರ ಪರಿಹಾರಕ್ಕೆ ರಾಜ್ಯದಿಂದ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ಸೂಚಿಸುವಿರಾ?, ಆಡಳಿತ ಪಕ್ಷದ ಶಾಸಕರೆ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ದೂರು ನೀಡುತ್ತಿದ್ದಾರೆ ಇದರ ವಿರುದ್ಧ ಕ್ರಮ ಜರುಗಿಸುವಿರಾ?,
ಬ್ರ್ಯಾಂಡ್ ಬೆಂಗಳೂರು- ಬಾಂಬ್ ಬೆಂಗಳೂರು ಮಾಡಲಾಗಿದೆ.

ಇದಕ್ಕೆ ಪರಿಹಾರ ಕೊಡುವಿರಾ?, ಗ್ಯಾರಂಟಿ ಹೆಸರಿನಲ್ಲಿ ಬೆಲೆ ಏರಿಕೆ, ವಿದ್ಧತ್ ದರ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ದರ ಹೆಚ್ಚಳ ಈ ಎಲ್ಲ
ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ ನಂತರ ಕರ್ನಾಟಕದಲ್ಲಿ ಪ್ರವಾಸ ಮಾಡಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ,
ಜಿಲ್ಲಾ ವಕ್ತಾರರಾದ ಎಂ.ಎಂ.ಹಿರೇಮಠ, ಪ್ರಧಾನ ಕಾರ್ಯದರ್ಶಿ ಪಕ್ಕಿರೇಶ ರಟ್ಟಿಹಳ್ಳಿ, ನಗರ ಅಧ್ಯಕ್ಷ ಅನಿಲ ಅಬ್ಬಿಗೇರಿ, ಮಾಧ್ಯಮ ಪ್ರಮುಖ ರಾಜು ಹೊಂಗಲ ರಾಹುಲ್ ಗಾಂಧಿಯವರಿಗೆ ಈ ಪ್ರಶ್ನೆಗಳಿಗೆ ಉತ್ತರಿಸಲು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article