ನೇಹಾ ಕೊಲೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 22: ನೇಹಾ ಕೊಲೆ ಪ್ರಕರಣದ ಪ್ರತಿಭಟನೆಯ ಕಿಚ್ಚು ದಿನದಿಂದ ದಿನಕ್ಕೆ ಭುಗಿಲೇಳುತ್ತಲೇ ಇದೆ. ಇದೀಗ ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು ವ್ಯಾಪಿಸಿದ್ದು, ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರೂ ಸಹ ಪ್ರತಿಭಟನೆ ಮುಂದುವರಿಸಿದ್ದಾರೆ.

ಹುಬ್ಬಳ್ಳಿಯಲ್ಲಂತೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ‘ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್​ಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದರು. ಟೈರ್​​ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖನ್, ಡಿಕೆ ಬ್ರದರ್ಸ್​ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್​ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್​​ಗೆ ಬೆಂಕಿ ಹಚ್ಚಿ ಫಯಾಜ್​ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು.

WhatsApp Group Join Now
Telegram Group Join Now
Share This Article