ಕಾಂಗ್ರೆಸ್ ಮತ್ತು ರಾಹುಲ್ ಪಾಕ್‌ನಲ್ಲೇ ನೆಲೆ ಹುಡುಕಬೇಕಿದೆ: ಬಿಜೆಪಿ ನಾಯಕ ಸಿ.ಟಿ ರವಿ

Ravi Talawar
WhatsApp Group Join Now
Telegram Group Join Now

ವಿಜಯಪುರ, ಏಪ್ರಿಲ್ 16: ಕಾಂಗ್ರೆಸ್‌ಗೆ ಭಾರತದಲ್ಲಿ, ಮುಖ್ಯವಾಗಿ ಹಿಂದೂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಬೆಂಬಲವಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಬೆಂಬಲವನ್ನು ಹುಡುಕುವುದನ್ನು ಬಿಟ್ಟು ಆ ಪಕ್ಷಕ್ಕೆ ಬೇರೆ ದಾರಿಯಿಲ್ಲ. ಹೀಗಾಗಿ ಕಾಂಗ್ರೆಸ್ ಗೆದ್ದಾಗ ಕೆಲವರು ಪಾಕಿಸ್ತಾನವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗುತ್ತಾರೆ ಎಂದು ಬಿಜೆಪಿ ನಾಯಕ ಸಿಟಿ ರವಿ ವ್ಯಂಗ್ಯವಾಡಿದರು.

ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಿಕೊಳ್ಳಲಿ ಎಂಬುದಾಗಿ ಸಲಹೆ ನೀಡುವೆ ಎಂದರು.

ಸಾಂಪ್ರದಾಯಿಕ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಹೋಗಿದ್ದಾರೆ. ಅಲ್ಲಿ ಶೇ 52 ರಷ್ಟು ಮುಸ್ಲಿಂ ಜನಸಂಖ್ಯೆ ಇರುವುದರಿಂದ ರಾಹುಲ್ ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಹೆಸರನ್ನು ಬಳಸುವುದರಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗೆ ಬರುತ್ತಿದ್ದ ಮತಗಳನ್ನೂ ಕಳೆದುಕೊಳ್ಳುತ್ತದೆ ಎಂದು ರವಿ ಟೀಕಿಸಿದರು.

ಕಾಂಗ್ರೆಸ್‌ಗೆ ಯಾವುದೇ ದೂರದೃಷ್ಟಿ ಇಲ್ಲ ಅಥವಾ ಬಿಜೆಪಿಯಂತೆ ಸೂಕ್ತ ಪ್ರಧಾನಿ ಅಭ್ಯರ್ಥಿಯನ್ನು ಹೊಂದಿಲ್ಲ. ಆದ್ದರಿಂದ, ನಿಮ್ಮ (ಇಂಡಿಯಾ ಮೈತ್ರಿಕೂಟ) ಪ್ರಧಾನಿ ಅಭ್ಯರ್ಥಿ ಯಾರು ಎಂಬುದಾಗಿ ಜನರು ಕೇಳುತ್ತಿದ್ದಾರೆ ಎಂದು ಸಿಟಿ ರವಿ ಹೇಳಿದರು.

WhatsApp Group Join Now
Telegram Group Join Now
Share This Article