ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚನ್ನಮ್ಮರ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್ : ಪ್ರಧಾನಿ ಮೋದಿ

Hasiru Kranti
WhatsApp Group Join Now
Telegram Group Join Now
* ಕರ್ನಾಟಕದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ.
* ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ ಅವರ ಪ್ರಣಾಳಿಕೆಯಲ್ಲೂ ವಿವರವಾಗಿ ಹೊರಬಂದಿದೆ.
* ಕಾಂಗ್ರೆಸನಿಂದ ಮಂಗಳಸೂತ್ರ ಕಸಿಯುವ ಯತ್ನ, ಜನರ ಆಸ್ತಿ ಲೂಟಿಗೆ ಮುಂದಾದ ಕಾಂಗ್ರೆಸ್: ನರೇಂದ್ರ ಮೋದಿ
*ಬೆಳಗಾವಿ ನಗರದಲ್ಲಿ   ಮೋದಿಜಿ ಚುನಾವಣೆ ಸಮಾವೇಶಕ್ಕೆ ಹರಿದು ಬಂದ್ ಜನ ಸಾಗರ
* ನಾವು ನೀವೆಲ್ಲರೂ ವಿಶ್ವನಾಯಕ ಮೋದೀಜಿ ಅವರು ಕೈ  ಬಲಪಡಿಸೋನ : ಬಿ.ಎಸ್.ಯಡಿಯೂರಪ್ಪ
ಬೆಳಗಾವಿ : ಪ್ರಸಕ್ತ  ಕಾಂಗ್ರೆಸ್ ಪಕ್ಷವು ಕುಟುಂಬವಾದದಲ್ಲಿ ದೇಶಹಿತವನ್ನು ಮರೆತಿದ್ದು ಆ ಪಕ್ಸಕ್ಕೆ ದೇಶಕ್ಕಿಂತ ಅಧಿಕಾರದ ಆಶೆ ಹೆಚ್ಚಾಗಿದೆ   ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟೀಕಿಸಿದ್ದಾರೆ.
         ಅವರು    ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ  ರವಿವಾರ  11 ಕ್ಕೆ ಆಯೋಜಿಸಲಾಗಿದ್ದ   ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಾ ಸಂಕಷ್ಟ  ಕೋವಿಡ್ ಅವಧಿಯಲ್ಲಿ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಕಾಂಗ್ರೆಸ್ಸಿಗರು ಟೀಕಿಸಿ ವಿರೋಧಿಸಿದ್ದರು. ಜನರನ್ನು ಗೊಂದಲದಲ್ಲಿ ಸಿಲುಕಿಸಿದ ಅವರು, ಇವಿಎಂ ವಿಚಾರದಲ್ಲಿ ಕೂಡ ಸುಳ್ಳು ಹೇಳಿ ಗೊಂದಲ ಮೂಡಿಸಿದ್ದರು. ಸುಪ್ರೀಂ ಕೋರ್ಟ್ ಕೆಲದಿನಗಳ ಹಿಂದೆ ಇವಿಎಂ ವಿಷಯದಲ್ಲಿ ಸ್ಪಷ್ಟ ಆದೇಶ ನೀಡಿ ಚಿಮಾರಿ ಹಾಕಿದೆ.
ಬಿಜೆಪಿ- ಎನ್‍ಡಿಎ ಸರಕಾರವು ಕಳೆದ 10 ವರ್ಷಗಳಲ್ಲಿ ಭಾರತೀಯ ನ್ಯಾಯಸಂಹಿತಾ ಮೂಲಕ ಆಂಗ್ಲರ ಮುಷ್ಟಿಯಿಂದ ಜನರನ್ನು ಹೊರತಂದಿದೆ. ಗುಲಾಮಿ ಪದ್ಧತಿಯಿಂದ ಭಾರತೀಯರನ್ನು ಹೊರಕ್ಕೆ ತರಲಾಗಿದೆ ಎಂದು ವಿವರಿಸಿದರು. ಜನರಿಗೆ ನ್ಯಾಯ ನೀಡಲು ಪೂರಕ ಕಾನುನು ತರಲಾಗಿದೆ..ಅತ್ಯಾಚಾರಿಗಳಿಗೆ ಕಠಿಣ ಕಾನೂನು ಇದೆ. ಶೀಘ್ರವೇ ಇದು ಜಾರಿಯಾಗಲಿದೆ ಎಂದರು.
ಕರ್ನಾಟಕದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಚಿಕ್ಕೋಡಿಯಲ್ಲಿ ಜೈನ ಮುನಿ ಹತ್ಯೆ, ಬೆಳಗಾವಿಯಲ್ಲಿ ನಡೆದ ಮಹಿಳೆ ಮೇಲಿನ ದೌರ್ಜನ್ಯವನ್ನು ಪ್ರಸ್ತಾಪಿಸಿದ ಅವರು, ಹುಬ್ಬಳ್ಳಿಯಲ್ಲಿ ಕಾಲೇಜಿನ ವಿದ್ಯಾರ್ಥಿನಿ ಹತ್ಯೆಯಿಂದ ದೇಶದಲ್ಲೇ ಆತಂಕ ಮೂಡಿದೆ. ಕಾಂಗ್ರೆಸ್ ಸರಕಾರವು ತುಷ್ಟೀಕರಣದ ಕಡೆ ಗಮನ ಕೊಡುತ್ತಿದೆ. ನೇಹಾಳ ಕುರಿತು ಕಾಂಗ್ರೆಸ್ಸಿಗರಿಗೆ ಕಳಕಳಿ ಇಲ್ಲ ಬದಲಾಗಿ ಅದಕ್ಕೆ ಸಮರ್ಥನೆ ನೀಡಿ  ಬೇರೆ ರೀತಿಯಿಂದ ಒಂದು ಕೋಮಿನ ಪರವಾಗಿ ಕೆಲಸ ಮಾಡುತ್ತಿದೆ.  ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಅದಕ್ಕೆ ಕಾಂಗ್ರೆಸ್ ಸಿಲಿಂಡರ್ ಸ್ಫೋಟ ಎನ್ನುತ್ತಿದೆ.
ಕಾಂಗ್ರೆಸ್ ಪಕ್ಷವು ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು. ಪಿಎಫ್‍ಐ ಜೊತೆ ಹೊಂದಾಣಿಕೆ ಮಾಡಿಕೊಂಡ ಪಕ್ಷ ಕಾಂಗ್ರೆಸ್ ನಾವು ಬ್ಯಾನ ಮಾಡಿದ್ದ ಅವರು ಅದಕ್ಕೆ ಮರುಜೀವ ನೀಡಿದ್ದಾರೆ ಎಂದು  ಆಕ್ಷೇಪಿಸಿದರು.
ಸ್ವಾತಂತ್ರ್ಯ ಚಳವಳಿಯನ್ನು ಮತಬ್ಯಾಂಕಿಗಾಗಿ ತುಷ್ಟೀಕರಣದ ಚರಿತ್ರೆಯಾಗಿ ಮಾಡಿದ ಪಕ್ಷ ಕಾಂಗ್ರೆಸ್. ಭಾರತದ ಮಹಾರಾಜರು ಅತ್ಯಾಚಾರಿಗಳು; ಬಡವರ ಜಮೀನನ್ನು ಕಿತ್ತುಕೊಂಡವರೆಂದು ಚರಿತ್ರೆ ಬರೆಸಿದ್ದರು. ಡಾ. ಬಿ ಆರ್ ಅಂಬೇಡ್ಕರ ಅವರನ್ನು ಉನ್ನತ ವಿದ್ಯಾಭ್ಯಾಸ ಕಲಿಯಲುವಿದೇಶಕ್ಕೆ  ಗಾಯಕವಾಡ ಮಹಾರಾಜರು ಕಳಿಸಿದ್ದರು ರಾಜ್ ಮಹಾರಾಜರಿಂದ, ಸಾಧು ಸಂತರಿಂದ ನಮ್ಮ ದೇಶದಲ್ಲಿ ಜನಸೇವೆಯಾಗಿದೆ.. ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚನ್ನಮ್ಮರ ಅವಮಾನ ಮಾಡಿದ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು. ನಿಜವಾಗಿ ನವಾಬರು, ನಿಜಾಮರು, ಸುಲ್ತಾನರು ಅತ್ಯಾಚಾರ ಮಾಡಿದವರು ಎಂದು ವಿವರಿಸಿದರು.
ಕಾಂಗ್ರೆಸ್ಸಿಗೆ ಔರಂಗಜೇಬನ ಅತ್ಯಾಚಾರ, ಮಂದಿರಗಳ ಧ್ವಂಸ ಮಾಡಿದ್ದು ನೆನಪಿಗೆ ಬರುವುದಿಲ್ಲ. ದೇಗುಲಗಳನ್ನು ಅವಮಾನ ಮಾಡುವವರ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆಕ್ಷೇಪಿಸಿದರು. ಭಾರತದ ವಿಭಜನೆಯಲ್ಲಿ ದೊಡ್ಡ ಪಾತ್ರ ವಹಿಸಿದವರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನ ತುಷ್ಟೀಕರಣ ನೀತಿ ಅವರ ಪ್ರಣಾಳಿಕೆಯಲ್ಲೂ ವಿವರವಾಗಿ ಹೊರಬಂದಿದೆ ಎಂದರು.
ಕಾಂಗ್ರೆಸ್ ಅಧಿಕಾರ ಎಂದರೆ ಅಭಿವೃದ್ಧಿಹೀನ ಸ್ಥಿತಿ ಎಂದು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ವಿದೇಶಿ ಹೂಡಿಕೆ ಕರ್ನಾಟಕದಲ್ಲಿ ಗರಿಷ್ಠ ಮಟ್ಟದಲ್ಲಿತ್ತು. ಕಾಂಗ್ರೆಸ್ ಅಧಿಕಾರದಲ್ಲಿ ಅಭಿವೃದ್ಧಿ ಹಿನ್ನಡೆ  ಸ್ಥಿತಿ ಇದೆ ಎಂದು ವಿವರಿಸಿದರು. ಕಾಂಗ್ರೆಸ್ ಎಂದರೆ ದಿವಾಳಿ ಪರಿಸ್ಥಿತಿ ಎಂದು ಜನರಿಗೆ ಅರ್ಥವಾಗಿದೆ ಎಂದು ತಿಳಿಸಿದರು.
ಬಿಜೆಪಿ- ಎನ್‍ಡಿಎ ಸರಕಾರವು ಸ್ವಸಹಾಯ ಗುಂಪು, ಕೃಷಿ ಉತ್ಪಾದನಾ ಸಂಘಗಳಿಗೆ ಬೆಂಬಲ ನೀಡಿದೆ. 10 ವರ್ಷಗಳಲ್ಲಿ 10 ಕೋಟಿ ಮಹಿಳೆಯರು ಸ್ವಸಹಾಯ ಗುಂಪುಗಳ ಪ್ರಯೋಜನ ಪಡೆದಿದ್ದಾರೆ. ಇಂಧನದಲ್ಲಿ ಇಥೆನಾಲ್ ಸೇರ್ಪಡೆಯಿಂದ ಕೃಷಿಕರಿಗೆ ಪ್ರಯೋಜನವಾಗಿದೆ. ಆದರೆ, ಕಾಂಗ್ರೆಸ್ ಪಕ್ಷವು ರೈತದ್ರೋಹಿಯಾಗಿದೆ. ಇಲ್ಲಿ ಬಿಜೆಪಿ ಸರಕಾರ ಇದ್ದಾಗ ರೈತರ ಖಾತೆಗೆ 10 ಸಾವಿರ ಸಿಗುತ್ತಿತ್ತು. 4 ಸಾವಿರವನ್ನು ಕಾಂಗ್ರೆಸ್ ಸರಕಾರ ಕಡಿತಗೊಳಿಸಿದೆ ಎಂದು ತಿಳಿಸಿದರು. ಆದರೆ, ರೈತರಿಗೆ 6 ಸಾವಿರ ಮುಂದುವರೆಯಲಿದೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ಸಿಗರು ನಿಮ್ಮ ಬ್ಯಾಂಕಿನ ಹಣ, ಆಸ್ತಿ, ಮಹಿಳೆಯರ ಬಳಿ ಇರುವ ಒಡವೆ ಸೇರಿ ಮಂಗಲಸೂತ್ರದ ಎಕ್ಸರೆ  ಮಾಡಲಿದ್ದಾರೆ. ಮುಂದೆ ನಿಮ್ಮ ಸಂಪತ್ತಿನ ಲೂಟಿ ಮಾಡಲಿದ್ದಾರೆ. ಅದನ್ನು ತಮ್ಮ ಮತಬ್ಯಾಂಕಿಗೆ ಕೊಡಲಿದ್ದಾರೆ ಎಂದು ವಿವರಿಸಿದರು. ಮೋದಿ ಬದುಕಿರುವವರೆಗೆ ಕಾಂಗ್ರೆಸ್ಸಿಗರ ಈ ಕನಸು ನನಸಾಗದು. ಅವರ ಆಟ ನಡೆಯುವುದಿಲ್ಲ ಎಂದು ಎಚ್ಚರಿಸಿದರು.
ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿ ಹೊಸ ನೀತಿ ತರಲು ಕಾಂಗ್ರೆಸ್ ಮುಂದಾಗಿದೆ. ಮಕ್ಕಳಿಗಾಗಿ ಶೇಖರಿಸಿಟ್ಟ ಹಣ, ಆಸ್ತಿಯನ್ನು ನೀವು ಅವರಿಗೆ ಕೊಡಲು ಸಾಧ್ಯವಾಗದು. ಅದನ್ನು ಮಕ್ಕಳಿಗೆ ಕೊಡಲು ಶೇ 55ರಷ್ಟು ತೆರಿಗೆ ಪಾವತಿಸಲು ಕಾಂಗ್ರೆಸ್ ಕೇಳಲಿದೆ. ಅದನ್ನು ಮತಬ್ಯಾಂಕಿಗೆ ಹಂಚಲು ನಿಮ್ಮ ಸಂಪತ್ತಿನ ಡಕಾಯಿತಿ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ ಎಂದು ತಿಳಿಸಿದರು.
ಇಂಥ ಚಿಂತನೆಗಳನ್ನು ಹೊಂದಿದ ಕಾಂಗ್ರೆಸ್ಸಿಗರಿಗೆ ಪಾಠ ಕಲಿಸಿ ಎಂದು ತಿಳಿಸಿದರು. ಸೇನೆಯಲ್ಲಿ ಯುವತಿಯರಿಗೆ ಅವಕಾಶ ಕೊಡಲಾಗುತ್ತಿದೆ. ಸಿಆರ್‍ಪಿಎಫ್‍ನಲ್ಲೂ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಿದೆ. ಜನರ ಕನಸೇ ಬಿಜೆಪಿ ಸಂಕಲ್ಪ ಎಂದು ಅವರು ನುಡಿದರು. ದೇಶಕ್ಕಾಗಿ ಸದಾ 24-7 ಗಂಟೆಕಾಲ ದುಡಿದು 2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸುತ್ತೇವೆ ಎಂದರು.
ಕರ್ನಾಟಕದ ಜನರ ಆಶೀರ್ವಾದ ಕೇಳಲು ಬಂದಿದ್ದೇನೆ. ಜಗದೀಶ್ ಶೆಟ್ಟರ್, ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗರಿಷ್ಠ ಮತದಿಂದ ಚುನಾಯಿಸಿ ಎಂದು ಹೇಳಿದರು. ಕಮಲದ 400 ಕ್ಕಿಂತ ಹೆಚ್ಚು ಸಂಸದರು ಆಯ್ಕೆಯಾಗಿದ್ದಾರೆ ನಿಮ್ಮ  ಮೋದಿಯವರಿಗೆ ಕೆಲಸ ಮಾಡಲು ಶಕ್ತಿ  ಮೋದಿಯವರನ್ನು ಸಶಕ್ತಗೊಳಿಸಲು ಬಿಜೆಪಿಗೆ ಬೆಂಬಲಿಸಿ ಎಂದರು. ಪ್ರತಿ ಬೂತ್‍ನಲ್ಲಿ ಬಿಜೆಪಿ ಗೆಲ್ಲುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ಕರ್ನಾಟಕದ ಎಲ್ಲೆಡೆ ಮತ್ತೊಮ್ಮೆ ಮೋದಿ ಎಂಬ ಧ್ವನಿಯೇ ಕೇಳುತ್ತಿದೆ ಎಂದರು. ನಾವೆಲ್ಲರೂ ಛತ್ರಪತಿ ಶಿವಾಜಿಯನ್ನು ಗೌರವಿಸುವವರು. ಜಗಜ್ಯೋತಿ  ಬಸವೇಶ್ವರರನ್ನು ಗೌರವಿಸುವವರು. ಬಸವೇಶ್ವರರು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸಿಕೊಟ್ಟವರು. ಭಾರತವನ್ನು ಶಕ್ತಿಶಾಲಿ ಮಾಡುವುದನ್ನು ನೀವೆಲ್ಲರೂ ಹೆಮ್ಮೆಯಿಂದ ನಿರೀಕ್ಷಿಸುತ್ತೀರಿ ಎಂದು ಆಶಿಸಿದರು. ಭಾರತದ 25 ಕೋಟಿ ಜನರು ಬಿಪಿಎಲ್ ರೇಖೆಯಿಂದ ಮೇಲೆ ಬಂದಿದ್ದಾರೆ. ಇದರಿಂದ ಹಿಂದೂಸ್ತಾನಿಗಳ ಆತ್ಮವಿಶ್ವಾಸ ಹೆಚ್ಚಾಗಿದೆ. ಬಡವರ ಕಲ್ಯಾಣ, ಒಳಿತಿಗಾಗಿ ಮತ್ತೊಮ್ಮೆ ಮೋದಿ ಸರಕಾರ ಬರಬೇಕಿದೆ ಎಂದರು.
ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯ ಸರಕಾರವು ಸಂಪೂರ್ಣ ದಿವಾಳಿಯಾಗಿದೆ ಚುನಾವಣೆ ಮುಗಿದಿರುವ ರಾಜ್ಯದ 14 ಕ್ಷೇತ್ರಗಳಲ್ಲಿ  14 ಕ್ಷೆತ್ರ ಬಿಜೆಪಿ ಗೆಲ್ಲಲಿದೆ ಮೇ 7 ಕ್ಕೆ ನಡೆಯುವ 14 ಕ್ಕೆ 14 ಕ್ಷೆತ್ರಗಳನ್ನು ಗೆಲ್ಲಲಿದ್ದೇವೆ ಎಂದರು. ನಾವು ನೀವೆಲ್ಲರೂ ವಿಶ್ವನಾಯಕ ಮೋದೀಜಿ ಅವರು ಕೈ  ಬಲಪಡಿಸೋನ ಎಂದರು. ಜಗದೀಶ್ ಶೆಟ್ಟರ್, ಅಣ್ಣಾಸಾಬೇಬ್ ಜೊಲ್ಲೆ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಅಂತರದಲ್ಲಿ ಗೆಲ್ಲಿಸುತ್ತೇವೆ. ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಿಸಿಕೊಡುತ್ತೇವೆ ಎಂದು ವಿಶ್ವಾಸದಿಂದ ನುಡಿದರು.
ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್ (ಬೆಳಗಾವಿ), ಅಣ್ಣಾಸಾಬೇಬ್ ಜೊಲ್ಲೆ (ಚಿಕ್ಕೋಡಿ), ಸಂಸದರಾದ ಮಂಗಳಾ ಅಂಗಡಿ, ಪ್ರಮುಖರಾದ ಡಾ.ಪ್ರಭಾಕರ ಕೋರೆ, ಈರಣ್ಣ ಕಡಾಡಿ, ಮಾಜಿ ಸಚಿವರಾದ್ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ,ಮಹೇಶ ತೆಂಗಿನಕಾಯಿ, ಡಿ ಎಂ ಐಹೋಳೆ, ಮಾಜಿ ಶಾಸಕರಾದ ಮಹಾಂತೇಶ್ ದೊಡ್ಡಗೌಡರ, ಜಗದೀಶ್ ಮೆಟಗುಡ, ಸಂಜಯ್ ಪಾಟೀಲ, ಮಹಾಂತೇಶ ಕವಟಗಿಮಠ, ವಿ ಆಯ ಪಾಟೀಲ, ಎಂ ಎಲ್ ಮುತ್ತೇನ್ನವರ, ಮಹದೇವಪ್ಪ ಯಾದವಾಡ ,ಅನಿಲ ಬೆನಕೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ರಾಜ್ಯ ಮಾಧ್ಯಮ ಸಲಹೆಗಾರ ಎಫ್ ಎಸ್ ಸಿದ್ದನಗೌಡ, ಪಕ್ಷದ ರಾಜ್ಯ- ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಮುಖಂಡರು ವೇದಿಕೆಯಲ್ಲಿದ್ದರು. ಪ್ರಧಾನಿಯವರ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ ಮೊದಲೇ ಭಾರಿ ಜನಸಾಗರವೇ ಹರಿದುಬಂದಿತ್ತು.
WhatsApp Group Join Now
Telegram Group Join Now
Share This Article