ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ

Ravi Talawar
WhatsApp Group Join Now
Telegram Group Join Now

ದೆಹಲಿ, ಏ.10: ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜ್ ಕುಮಾರ್ ಆನಂದ್  ತಮ್ಮ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಎಎಪಿಯ ನೀತಿಯಿಂದ ಅತೃಪ್ತನಾಗಿ ಈ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಅರವಿಂದ್​​​ ಕೇಜ್ರಿವಾಲ್​​​ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುವೇ ಎಂದಿದ್ದರು. ಆದರೆ ಇಂದು ಪಕ್ಷ ಮತ್ತು ಸರ್ಕಾರ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ. ನಾನು ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿ ಕಚೇರಿಗೆ ಕಳುಹಿಸಿದ್ದೇನೆ ಎಂದು ರಾಜ್ ಕುಮಾರ್ ಆನಂದ್ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article