ಧೀರೇನ್ ಆರ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ್

Ravi Talawar
WhatsApp Group Join Now
Telegram Group Join Now
     ಧೀರೇನ್ ರಾಮ್ ಕುಮಾರ್ ಅವರನ್ನು ಧೀರೇನ್ ಆರ್ ರಾಜ್ ಕುಮಾರ್ ಆಗಿ ಕೆ.ಆರ್.ಜಿ.ಸ್ಟೂಡಿಯೋಸ್ ಮರುಪರಿಚಯಿಸಿದೆ. ಧೀರೇನ್ ಅವರ ಹುಟ್ಟುಹಬ್ಬದ ಅಂಗವಾಗಿ ಒಂದು ಹೊಸ ಚಿತ್ರವನ್ನೂ ಕೂಡ ಕೆ.ಆರ್.ಜಿ ಘೋಷಿಸಿದೆ.
      ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವನ್ನು ಹೊಂದಿರುವ ಕೆ  ಆರ್ ಜಿ ಸಂಸ್ಥೆ, ಇದೀಗ ಈ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯನ್ನು ಇಟ್ಟಿದೆ. ‘ರತ್ನನ್ ಪ್ರಪಂಚ’ ಮೂಲಕ ರೋಹಿತ್ ಪದಕಿ, ‘ಪೌಡರ್’ ಚಿತ್ರದ ಮೂಲಕ ಜನಾರ್ದನ್ ಚಿಕ್ಕಣ್ಣ, ‘ಗುರುದೇವ್ ಹೊಯ್ಸಳ’ ಚಿತ್ರದ ಮೂಲಕ ವಿಜಯ್ ನಾಗೇಂದ್ರ ಮುಂತಾದ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಕೆ ಆರ್ ಜಿ ಸಂಸ್ಥೆ ಪರಿಚಯಿಸಿದೆ. ಪ್ರಸ್ತುತವಾಗಿ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರ ಸೆಟ್ಟೇರಿದ್ದು, ‘ಪೌಡರ್’ ಚಿತ್ರದ ಡಬ್ಬಿಂಗ್ ಕಾರ್ಯ ಬಿರುಸಿನಿಂದ ಸಾಗುತ್ತಿದೆ.
WhatsApp Group Join Now
Telegram Group Join Now
Share This Article