ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಸಾಮಾನ್ಯರ ಜೀವನ ಸುಧಾರಣೆಯಾಗಿಲ್ಲ: ಗೃಹ ಸಚಿವ ಜಿ ಪರಮೇಶ್ವರ

Ravi Talawar
WhatsApp Group Join Now
Telegram Group Join Now

ತುಮಕೂರು,ಏಪ್ರಿಲ್​ 12: 2024ರ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದಿಂದ ಸಾಮಾನ್ಯ ಜನರಿಗೆ ಏನೂ ಸಿಕ್ಕಿಲ್ಲ ಮತ್ತು ಜನರು ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದಿದ್ದಾರೆ.

‘ಒಬ್ಬ ಸಾಮಾನ್ಯ ಮನುಷ್ಯನಿಗೆ ವೈಯಕ್ತಿಕವಾಗಿ ಏನೂ ಬದಲಾವಣೆಯಾಗಿಲ್ಲ. ಆದ್ದರಿಂದ ಸಹಜವಾಗಿಯೇ, ಅವರು ತಕ್ಕ ಪ್ರತಿಕ್ರಿಯೆ ನೀಡುತ್ತಾರೆ. ಮೋದಿಜಿಯವರ 10 ವರ್ಷಗಳ ಆಡಳಿತದ ನಂತರವೂ, ದೇಶದಲ್ಲಿನ ಸಾಮಾನ್ಯ ಜನರ ಜೀವನ ಸುಧಾರಣೆಯಾಗಿಲ್ಲ. ಅವರಿಗೆ ಹೆಚ್ಚುವರಿಯಾಗಿ ಏನೂ ಸಿಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
Share This Article