ಲೋಕಸಭೆ ಸಾರ್ವತ್ರಿಕ ಚುನಾವಣೆ: ಕೋಳೂರು ಗ್ರಾಮದಲ್ಲಿ ಮತದಾನ ಜಾಗೃತಿ

Ravi Talawar
WhatsApp Group Join Now
Telegram Group Join Now

ಬಳ್ಳಾರಿ,ಏ.16 ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕುರುಗೋಡು ತಾಪಂ ಇಒ ಹಾಗೂ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಕೆ.ವಿ.ನಿರ್ಮಲಾ ಅವರು ತಿಳಿಸಿದರು.

ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಕಡಿಮೆ ಮತದಾನವಾಗಿರುವ 1ನೇ ವಾರ್ಡ್‍ಗೆ ಮಂಗಳವಾರ ಭೇಟಿ ಮತದಾನ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಮತದಾನ ಪ್ರಕ್ರಿಯೆಯಲ್ಲಿ ನಮ್ಮ ಓಟು, ನಮ್ಮ ಹಕ್ಕಾಗಿದ್ದು, ಕಡ್ಡಾಯವಾಗಿ ಮತ ಚಲಾಯಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಮನವರಿಕೆ ಮಾಡಿದರು.

ಪ್ರತಿ 5 ವರ್ಷಕ್ಕೊಮ್ಮೆ ಬರುವ ಚುನಾವಣೆಯ ಹಬ್ಬದಲ್ಲಿ ಎಲ್ಲರೂ ಮತದಾನ ಮಾಡಬೇಕು. ಯಾವುದೇ ಹಣ, ಆಮಿಷಗಳಿಗೆ ಒಳಗಾಗದೇ ನಿರ್ಭಿತಿಯಿಂದ ಮತ ಚಲಾಯಿಸುವಂತೆ ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಿದರು. ಈ ಸಂಧರ್ಭದಲ್ಲಿ ಕೋಳೂರು ಗ್ರಾಪಂ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಹಾಜರಿದ್ದರು.

WhatsApp Group Join Now
Telegram Group Join Now
Share This Article