ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಚಿವ ರಾಮದಾಸ್ ಅಠಾವಳೆ

Ravi Talawar
WhatsApp Group Join Now
Telegram Group Join Now

ಮುಂಬೈ: ಬಿಜೆಪಿ ದೇಶದ ಸಂವಿಧಾನ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೆ ಹೇಳುತ್ತಿರುವುದನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಈ ಹೇಳಿಕೆ ನೀಡುವುದನ್ನು ನಿಷೇಧಿಸಬೇಕು ಎಂದು ಪ್ರಮುಖ ದಲಿತ ನಾಯಕ ಅಠಾವಳೆ ಬುಧವಾರ ಸುದ್ದಿಗಾರರಿಗೆ ತಿಳಿಸಿದರು. ‘ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ ಎಂದು ರಾಹುಲ್ ಗಾಂಧಿ ಆಗಾಗ್ಗೆ ಹೇಳುತ್ತಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಈ ಆರೋಪಗಳನ್ನು ಹಲವಾರು ಬಾರಿ ತಳ್ಳಿಹಾಕಿದ್ದಾರೆ’ ಎಂದು ಅವರು ಹೇಳಿದರು.

ರಾಹುಲ್ ಅವರು ಆಗಾಗ್ಗೆ ನೀಡುತ್ತಿರುವ ಈ ಹೇಳಿಕೆಗಳ ವಿರುದ್ಧ ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ಅವರು ಹಾಗೆ ಹೇಳುವುದನ್ನು ಆಯೋಗ ನಿಷೇಧಿಸಬೇಕು ಮತ್ತು ಅವರ ವಿರುದ್ಧ ಕೆಲವು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

 

WhatsApp Group Join Now
Telegram Group Join Now
Share This Article