ಮೋದಿ ಹೇಳಿಕೆ ಘೋರ; ಚುನಾವಣಾ ಆಯೋಗದ ಮೌನ ಕ್ರೂರ: ಸಿಪಿಎಂ

Ravi Talawar
WhatsApp Group Join Now
Telegram Group Join Now

ನವದೆಹಲಿ,22: ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾನುವಾರ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವುದು ಚುನಾವಣಾ ವಿವಾದವಾಗಿ ಮಾರ್ಪಟ್ಟಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್(ಸಿಪಿಎಂ) ಈಗ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಚುನಾವಣಾ ಆಯೋಗ(ಇಸಿಐ) ಪ್ರಧಾನಿ ಮೋದಿ ವಿರುದ್ಧ ‘ಕಠಿಣ ಕ್ರಮ’ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ಸಿಪಿಎಂ ಮೂಲಗಳ ಪ್ರಕಾರ, ಚುನಾವಣಾ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘಿಸಿದ ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿ ‘ಭಾರತದ ಕಾಳಜಿಯುಳ್ಳ ನಾಗರಿಕರು’ ಆನ್‌ಲೈನ್ ಅರ್ಜಿ ಅಭಿಯಾನ ಆರಂಭಿಸಿದ್ದಾರೆ.

ಆಯೋಗದ ಮೌನವನ್ನು ಪ್ರಶ್ನಿಸಿರುವ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪ್ರಧಾನಿ ಮೋದಿಯ ಈ ಹೇಳಿಕೆ ಅತ್ಯಂತ ಅಮಾನುಷವಾಗಿದೆ ಎಂದು ಸೋಮವಾರ ಕಿಡಿ ಕಾರಿದ್ದಾರೆ.

WhatsApp Group Join Now
Telegram Group Join Now
Share This Article