ಆಂಧ್ರದಲ್ಲಿ ವೈದ್ಯರ ಕುಟುಂಬದ ಐವರ ನಿಗೂಢ ಸಾವು!

Ravi Talawar
WhatsApp Group Join Now
Telegram Group Join Now

ವಿಜಯವಾಡ30: ಆಂಧ್ರಪ್ರದೇಶದ ವಿಜಯವಾಡದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇದು ಅನುಮಾನ ಸೃಷ್ಟಿಸಿದೆ. ಈ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಡಾ. ಶ್ರೀನಿವಾಸ್ ಶವವಾಗಿ ಪತ್ತೆಯಾಗಿದ್ದು  ಮನೆಯಲ್ಲಿ ಅವರ ಪತ್ನಿ, ಮಕ್ಕಳು, ತಾಯಿಯ ಹೆಣವೂ ಪತ್ತೆಯಾಗಿದೆ.

ಡಾ. ಶ್ರೀನಿವಾಸ್ ಎಂಬ ವೈದ್ಯ ತನ್ನ ಮನೆಯ ಹೊರಗೆ, ಅಂಗಳದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯೊಳಗೆ ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ತಾಯಿಯ ಶವಗಳು ರಕ್ತದ ಮಡುವಿನಲ್ಲಿ ಪತ್ತೆಯಾಗಿವೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಗುರುನಾನಕ್ ನಗರದಲ್ಲಿ ಈ ಘಟನೆ ನಡೆದಿದ್ದು, ಡಾ. ಶ್ರೀನಿವಾಸ್ ತಮ್ಮ ಮನೆಯ ಹೊರಗಿನ ಅಂಗಳದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಡಾ.ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕುಟುಂಬದ ಇತರ ನಾಲ್ವರನ್ನು ಕೊಲೆ ಮಾಡಲಾಗಿದೆಯೇ ಅಥವಾ ಬೇರೆ ಏನಾದರೂ ವಿಷಯವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶ್ವಾನದಳ ಹಾಗೂ ಸುಳಿವು ತಂಡ ಮನೆಯಿಂದ ಸಾಕ್ಷ್ಯ ಸಂಗ್ರಹಿಸಿದೆ.

ಪೊಲೀಸರು ರಕ್ತದಿಂದ ಕೂಡಿದ್ದ ಚೂರಿಯನ್ನು ವಶಪಡಿಸಿಕೊಂಡಿದ್ದಾರೆ. ಡಾ. ಶ್ರೀನಿವಾಸ್ ಅವರು ಬರೆದಿ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ನನ್ನ ಸಹೋದರನಿಗೆ ಕಾರಿನ ಕೀಗಳನ್ನು ನೀಡಿ” ಎಂದು ಬರೆಯಲಾಗಿದೆ. ಅವರ ಕಾರಿನಲ್ಲಿದ್ದ ಬ್ಯಾಗನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

 

WhatsApp Group Join Now
Telegram Group Join Now
Share This Article