ಸಂವಿಧಾನ ಬದಲಿಸುತ್ತೇವೆ ಎಂದು ಯಾರೂ ಭಯಪಡುವ ಅವಶ್ಯಕತೆ ಇಲ್ಲ: ಪ್ರಧಾನಿ ನರೇಂದ್ರ ಮೋದಿ 

Ravi Talawar
WhatsApp Group Join Now
Telegram Group Join Now

ನವದೆಹಲಿ, ಏಪ್ರಿಲ್ 15: ನಾವು ದೊಡ್ಡ ಯೋಜನೆ ಹಮ್ಮಿಕೊಂಡಿದ್ದೇವೆ ಎಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಯಾರೂ ಭಯಪಡುವ ಅವಶ್ಯಕತೆ ಇಲ್ಲ. ದೇಶದ ಹಿತಕ್ಕಾಗಿ ತಮ್ಮ ನಿರ್ಧಾರ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.

ಎಎನ್​ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ  ಮಾತನಾಡುತ್ತಿದ್ದ ಪ್ರಧಾನಿಗಳು, ವಿಪಕ್ಷಗಳ ಭಯ ಹೋಗಲಾಡಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ವಿಪಕ್ಷಗಳು ಮಾಡುತ್ತಿರುವ ಆರೋಪಗಳನ್ನು ನರೇಂದ್ರ ಮೋದಿ ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ.

‘ನನಗೆ ದೊಡ್ಡ ಪ್ಲಾನ್​ಗಳಿವೆ ಎಂದು ನಾನು ಹೇಳಿದರೆ ಯಾರೂ ಕೂಡ ಹೆದರುವ ಅಗತ್ಯ ಇಲ್ಲ. ಯಾರನ್ನೂ ಭಯಪಡಿಸಲು ಅಥವಾ ಹಿಮ್ಮೆಟ್ಟಿಸಲು ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಈ ದೇಶದ ಪರಿಪೂರ್ಣ ಅಭಿವೃದ್ಧಿಗಾಗಿ ನಾನು ಹೆಜ್ಜೆ ಇಡುತ್ತೇನೆ,’ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

‘ನಾವೇ ಎಲ್ಲಾ ಮಾಡಿದ್ದು ಎಂದು ಸರ್ಕಾರಗಳು ಹೇಳಿಕೊಳ್ಳುತ್ತೇವೆ. ನಾನು ಎಲ್ಲವನ್ನೂ ಮಾಡಿದ್ದೇನೆ ಎಂದು ಹೇಳುವುದಿಲ್ಲ. ಸರಿಯಾದ ರೀತಿಯಲ್ಲಿ ಎಲ್ಲವನ್ನೂ ಮಾಡಲು ನಾನು ಯತ್ನಿಸಿದ್ದೇನೆ. ಆದರೆ, ನನ್ನ ದೇಶಕ್ಕೆ ಅದೆಷ್ಟೋ ಅಗತ್ಯತೆಗಳಿರುವುದರಿಂದ ನಾನು ಮಾಡಬೇಕಿರುವುದು ಬಹಳಷ್ಟಿದೆ. ಪ್ರತಿಯೊಂದು ಕುಟುಂಬದ ಕನಸನ್ನು ಹೇಗೆ ನನಸು ಮಾಡಲಿ? ಅದಕ್ಕಾಗಿ ಇದು ಟ್ರೈಲರ್ ಮಾತ್ರ ಎಂದು ನಾನು ಹೇಳಿದ್ದು,’ ಎಂದಿದ್ದಾರೆ ಮೋದಿ.

WhatsApp Group Join Now
Telegram Group Join Now
Share This Article