ಆಕ್ಷೇಪಾರ್ಹ ಟ್ವೀಟ್ ಪ್ರಕರಣ: ಜೆ.ಪಿ.ನಡ್ಡಾ, ವಿಜಯೇಂದ್ರ, ಮಾಳವೀಯಗೆ ನೋಟಿಸ್ ಜಾರಿ

Ravi Talawar
WhatsApp Group Join Now
Telegram Group Join Now

ಬೆಂಗಳೂರು: ಆಕ್ಷೇಪಾರ್ಹ ಟ್ವೀಟ್ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಿಜೆಪಿಯ ಐಟಿ ಸೆಲ್ ವಿಭಾಗದ ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವೀಯ ಅವರಿಗೆ ನೋಟಿಸ್​ ಜಾರಿ ಮಾಡಲಾಗಿದೆ. ನೋಟಿಸ್ ತಲುಪಿದ 7 ದಿನಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ಕರ್ನಾಟಕದ ಬಿಜೆಪಿಯ ಅಧಿಕೃತ ‘ಎಕ್ಸ್’​ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಲಾಗಿತ್ತು. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಹೆಸರಿನ ಮೊಟ್ಟೆಗಳಿರುವ ಗೂಡಿನಲ್ಲಿ ಮುಸ್ಲಿಂ ಹೆಸರಿನ ಮೊಟ್ಟೆ ತಂದಿಟ್ಟು ಪೋಷಿಸುವಂತೆ, ಅದೇ ಮುಸ್ಲಿಂ ಹೆಸರಿನ ಮೊಟ್ಟೆಯಿಂದ ಹೊರಬಂದ ಮರಿ ಕೊನೆಗೆ ಇತರ ಹಕ್ಕಿಗಳನ್ನು ಓಡಿಸುತ್ತಿರುವಂತೆ ಸೂಚಿಸುವ ಕಾರ್ಟೂನ್ ವಿಡಿಯೋವೊಂದನ್ನು ಮೇ 4ರಂದು ಬಿಜೆಪಿ ಹಂಚಿಕೊಂಡಿತ್ತು.

ಈ ವಿವಾದಿತ ಪೋಸ್ಟ್ ವಿರುದ್ಧ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ದೂರು ನೀಡಿದ್ದರು. ಇದರನ್ವಯ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ, ಜೆ.ಪಿ. ನಡ್ಡಾ, ವಿಜಯೇಂದ್ರ, ಅಮಿತ್​ ಮಾಳವೀಯ ಅವರಿಗೆ ಮೇ 6ರಂದು ಪೊಲೀಸರು ನೋಟಿಸ್​ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

WhatsApp Group Join Now
Telegram Group Join Now
Share This Article