ಮೇ 13 ರಂದು ಪಿಂಚಣಿ ಅದಾಲತ್

Ravi Talawar
WhatsApp Group Join Now
Telegram Group Join Now

ಬಳ್ಳಾರಿ,ಮೇ 02 ಕಾರ್ಮಿಕರ ಭವಿಷ್ಯ ನಿಧಿ ಪ್ರಾದೇಶಿಕ ಕಚೇರಿ ಬಳ್ಳಾರಿ ಇವರ ವತಿಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಳ್ಳಾರಿ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ.

ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿಯ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ, ಇವರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ತಮ್ಮ ಪಿ.ಪಿ.ಒ ಸಂಖ್ಯೆ ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ, ಕುಂದು ಕೊರತೆಯ ಸ್ವರೂಪ ಇತ್ಯಾದಿಗಳನ್ನು ಬರೆದು ಪತ್ರ ಮೂಲಕ ಮೇ 10 ರೊಳಗೆ ಕಳುಹಿಸಬಹುದು. ಪತ್ರ, ಲಕೋಟೆಯ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article