ಭಯೋತ್ಪಾದಕರನ್ನು ಅವರ ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ

Ravi Talawar
WhatsApp Group Join Now
Telegram Group Join Now

ನವದೆಹಲಿ, ಏಪ್ರಿಲ್ 12 : ದೇಶದಲ್ಲಿರುವುದು ದೃಢ ಸರ್ಕಾರ ಹೀಗಾಗಿ ಭಯೋತ್ಪಾದಕರನ್ನು ಅವರ ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಉತ್ತರಾಖಂಡದ ರಿಷಿಕೇಶದಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತದ ತ್ರಿವರ್ಣ ಧ್ವಜ ಯುದ್ಧ ವಲಯದಲ್ಲೂ ಭದ್ರತೆಯ ಭರವಸೆಯಾಗುತ್ತಿದೆ. 7 ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಲಾಗಿದೆ ಎಂದರು.

ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲಾಗಿದೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಿಕ್ಕಿದೆ. ಜತೆಗೆ ಸಾಮಾನ್ಯ ವರ್ಗಕ್ಕೆ ಸೇರಿದ ಬಡವರಿಗೂ ಶೇ.100ರಷ್ಟು ಮೀಸಲಾತಿ ಸಿಕ್ಕಿದೆ.

ಕಳೆದ 10 ವರ್ಷಗಳಲ್ಲಿ ಭಾರತವನ್ನು ಹಿಂದಿಗಿಂತಲೂ ಹಲವು ಪಟ್ಟು ಬಲಿಷ್ಠಗೊಳಿಸಿರುವ ಸರ್ಕಾರ ಇಂದು ದೇಶದಲ್ಲಿದೆ ಎಂದರು. ದೇಶದಲ್ಲಿ ದುರ್ಬಲ ಮತ್ತು ಅಸ್ಥಿರ ಸರ್ಕಾರ ಇದ್ದಾಗಲೆಲ್ಲಾ ಶತ್ರುಗಳು ಲಾಭ ಮಾಡಿಕೊಂಡಿದ್ದಾರೆ, ಮತ್ತು ಭಯೋತ್ಪಾದನೆಯನ್ನು ಹಬ್ಬಿಸಿದ್ದಾರೆ. ಈಗ ಮೋದಿ ಸರ್ಕಾರ ಬಲಿಷ್ಠವಾಗಿದೆ ಹಾಗಾಗಿ ಅವರ ಮನೆಗಳಿಗೇ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಮೋದಿ ಹೇಳಿದರು

WhatsApp Group Join Now
Telegram Group Join Now
Share This Article