ನೇಹಾ ಕೊಲೆ; ನ್ಯಾಯಕ್ಕಾಗಿ ದಿಂಗಾಲೇಶ್ವರ ಶ್ರೀ ಸಹಿತ ಸ್ವಾಮೀಜಿಗಳ ಪ್ರತಿಭಟನೆ

Hasiru Kranti
WhatsApp Group Join Now
Telegram Group Join Now

ಹುಬ್ಬಳ್ಳಿ: ನೇಹಾ ಹಿರೇಮಠ ಕಗ್ಗೊಲೆ ದೇಶವನ್ನು ದುಃಖಕ್ಕೆ ಈಡು ಮಾಡುವಂತಾಗಿದ್ದು, ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳದೇ ರಾಜ್ಯ ಸರ್ಕಾರ ಸೂಕ್ತ ತನಿಖೆಯನ್ನು ನಡೆಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಫಕೀರ್ ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ಶನಿವಾರ ನೇಹಾ ಹಿರೇಮಠ ಕೊಲೆ ಖಂಡಿಸಿ ಫಕೀರ ದಿಂಗಾಲೇಶ್ವರ ಸ್ವಾಮೀ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ನೇಹಾಳಿಗೆ ನ್ಯಾಯ ಸಿಗಬೇಕಿದೆ. ಮಹಿಳೆಯರಿಗೆ ರಕ್ಷಣೆ ಹಾಗೂ ಸ್ವಾತಂತ್ರ್ಯ ಸಿಗಬೇಕು. ಬಿಜೆಪಿ ಪಕ್ಷದವರು ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ಳುವ ನೀಚ ಕೆಲಸಕ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮಾನವೀಯತೆ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದ್ದು, ಈ ಸಾವನ್ನು ಬಹು ಸಂಖ್ಯಾತ ರಾಜಕಾರಣಿಗಳು ಬಳಕ ಮಾಡಿಕೊಳ್ಳುತ್ತಾರೆಂಬ ನಾಡಿನ ಜನ ಅಂದುಕೊಂಡಿರಲಿಲ್ಲ ಎಂದರು.

ಯಾವುದೇ ಸರ್ಕಾರ ಇರಲಿ ಇಂತಹ ಘಟನೆ ಹಾಗೂ ಕೊಲೆಯನ್ನು ಸಾಮಾನ್ಯವಾಗಿ ತಗದೆಕೊಳ್ಳಬಾರದು. ಏಕಕಾಲಕ್ಕೆ ಬೆಂಗಳೂರು, ತುಮಕೂರು, ಹುಬ್ಬಳ್ಳಿಯಲ್ಲಿ ಕೊಲೆಗಳು ಆಗುತ್ತಿವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಏನು ಮಾಡುತ್ತಿವೆ ಎಂಬ ಪ್ರಶ್ನೆ ಮೂಡಿದೆ ಎಂದರು.

ಒಂದು ಪಕ್ಷ ಲವ್ ಜಿಹಾದ್ ಎಂದು ಹೇಳುತ್ತಾ ಬಂದಿದ್ದೇವೆ, ಆದರೇ ಇಂತಹ ಕ್ರೂರಿಗಳಿಗೆ ಉಗ್ರ ಶಿಕ್ಷೆ ಏಕೆ ಆಗಲಿಲ್ಲ. ಎರಡೂ ಪಕ್ಷಗಳಿಗೆ ಮಾನ ಮರ್ಯಾದೆ ಇದ್ದರೆ ಆರೋಪಿಗೆ ತಕ್ಷಣವೇ ಉಗ್ರ ಶಿಕ್ಷೆ ಆಗಬೇಕಿದೆ.

ಇನ್ನೂ ಪ್ರಧಾನಿಯವರ ಭೇಟಿ ಬಚಾವೋ..ಬೇಟಿ ಮಡಾವೋ ಎಂಬುದು ಅಕ್ಷರಶಃ ಅನುಷ್ಠಾನಕ್ಕೆ ಬರಬೇಕು.ಸರಕಾರವೇ ಮಹಿಳೆಯರ ರಕ್ಷಣೆಗೆ ಪರವಾಣಿಗೆಯ ಆಯುಧ ನೀಡುವಂತೆ ವ್ಯವಸ್ಥೆ ಜಾರಿಗೆ ಬರಬೇಕು. ನೇಹಾ ಘಟನೆಯನ್ನು ಎಲ್ಲರೂ ನಿಂತು ನೋಡಿದರೆ ವಿನಹ ಯಾರು ರಕ್ಷಣೆಗೆ ಬರಲಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರ ರಕ್ಷಣೆಗೆ ಆಯುಧ ಇಟ್ಟು ಕೊಳ್ಳಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಹೊಸಪೇಟೆಯ ಅಮ್ಮನವರು ಮಾತನಾಡಿ,ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಿ ಎಂದು ಸೆರಗು ಒಡ್ಡಿ ಬೇಡಿಕೊಳ್ಳುತ್ತೇವೆ. ಹೆಣ್ಣಿಗೆ ಬೆಂಬಲ, ರಕ್ಷಣೆ ನೀಡುವ ಕೆಲಸ ಆಗಬೇಕಿದೆ. ದೇಶಕ್ಕೆ ಯೋಗಿ ಆದತ್ಯನಾಥರಂತೆ ನಾಯಕ ಬೇಕಿದೆ. ಇಂತಹ ಕೊಲೆಗಾರನಿಗೆ ಸ್ಪಾಟ್ ನಲ್ಲಿಯೇ ಎನ್ಕೌಂಟರ್ ಮಾಡಬೇಕಿದೆ. ಅವನಿಗೆ ಉಗ್ರ ಶಿಕ್ಷೆ ಆಗೋವರೆಗೂ ಪ್ರತಿಭಟನೆ ನಿಲ್ಲದು ಎಂದರು. ಪ್ರತಿಭಟನಾ ಸಮಾವೇಶದಲ್ಲಿ ಶಿಗ್ಗಾವಿ ಸಂಗನಬಸವ ಸ್ವಾಮೀಜಿ, ಬೊಮ್ಮನಹಳ್ಳಿ ಶಿವಯೋಗಿ ಮಹಾಸ್ವಾಮಿಜಿ, ಬಸವಧರ್ಮ ಪೀಠದ ಶ್ರೀ, ಮುರಘಾಮಠದ ಮಲ್ಲಿಕಾರ್ಜುನ ಶ್ರೀ, ಸವಣೂರಿನ ದೊಡ್ಡ ಕಲ್ಮಠದ ಶ್ರೀ ಸೇರಿದಂತೆ ಮೊದಲಾದವರು ಆರೋಪಿಗೆ ಕಾನೂನಿನಲ್ಲಿರುವ ಕ್ರೂರ ಶಿಕ್ಷೆ ನೀಡಿ, ನೇಹಾಳ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.

WhatsApp Group Join Now
Telegram Group Join Now
Share This Article