ಕಾರೆಕಲ್ಲು ಗ್ರಾಮದಲ್ಲಿ ಮತದಾನ ಜಾಗೃತಿಗೆ ರಂಗೋಲಿ ಸ್ಪರ್ಧೆ

Ravi Talawar
WhatsApp Group Join Now
Telegram Group Join Now

ಬಳ್ಳಾರಿ,ಏ.24 :ಲೋಕಸಭಾ ಚುನಾವಣೆಗೆ ಮೇ 07 ರಂದು ನಡೆಯುವ ಮತದಾನ ದಿನದಂದು ಪ್ರತಿಯೊಬ್ಬ ಅರ್ಹರು ಮತದಾನ ಮಾಡಬೇಕು. ನಿಮ್ಮವರಿಗೂ ಮತದಾನ ಮಾಡುವಂತೆ ತಿಳಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ವಾಗೇಶ್ ಶಿವಾಚಾರ್ಯ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬಳ್ಳಾರಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಮಹತ್ವ ಸಾರಲು ಬಳ್ಳಾರಿ ತಾಲ್ಲೂಕಿನ ಕಾರೇಕಲ್ಲು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರ್ಹ ಮತದಾರರು ಯಾವುದೇ ಉಡುಗೊರೆಗಳಿಗೆ ಮರುಳಾಗದೇ ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಯುವತಿಯರಿಂದ ಆಕರ್ಷಕ ರಂಗೋಲಿ ಮೂಡಿದ್ದವು. *ರಂಗೋಲಿ ಸ್ಪರ್ಧೆ ವಿಜೇತರ ಪಟ್ಟಿ* ಪ್ರಥಮ ಸ್ಥಾನ- ಸುಷ್ಮಾ, ದ್ವಿತೀಯ ಸ್ಥಾನ- ಶಾಂತಿ ಮತ್ತು ತೃತೀಯ ಸ್ಥಾನ- ಯಶೋಧ. ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯತ್‍ನ ಕಾರ್ಯನಿರ್ವಾಹಕಾಧಿಕಾರಿ ಮಡಗಿನ ಬಸಪ್ಪ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ಸೇರಿದಂತೆ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article