ಸಿರುಗುಪ್ಪ: ಕ್ಯಾಂಡಲ್ ಹಿಡಿದು ಮತದಾನ ಜಾಗೃತಿ

Ravi Talawar
WhatsApp Group Join Now
Telegram Group Join Now

ಬಳ್ಳಾರಿ,ಏ.23 ಮೇ 07 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಸಿರುಗುಪ್ಪ ಪಟ್ಟಣದಲ್ಲಿ ಕ್ಯಾಂಡಲ್ ಹಿಡಿದು ಪ್ರಮುಖ ಬೀದಿಯಲ್ಲಿ ಸಂಚರಿಸುವ ಮೂಲಕ ಸೋಮವಾರ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಸಿರುಗುಪ್ಪ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಮತ್ತು ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಿಂದ ಗಾಂಧಿ ವೃತ್ತದವರೆಗೂ ಮತದಾನದ ಜಾಗೃತಿ ಘೋಷಣೆಗಳ ಫಲಕಗಳ ಮೂಲಕ ಕ್ಯಾಂಡಲ್ ಹಿಡಿದು ಸಾರ್ವಜನಿಕರಿಗೆ ಮೇ 07 ರಂದು ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಗುರುಪ್ರಸಾದ್ ಸೇರಿದಂತೆ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article