ಬೆಂಗಳೂರು : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು ಜುಲೈ 07ರ ಇಂದು ಕೊನೆಯ ದಿನವಾಗಿದೆ ಎಂದು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೃಷಿ ಇಲಾಖೆ ಹೇಳಿದೆ.
ಪಿ.ಎಂ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ 14ನೇ ಕಂತಿನ ನೆರವಿನ ಹಣ ಪಡೆಯಲು ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದೆ. ಹಣ ವರ್ಗಾವಣೆಯು ಇ-ಕೆವೈಸಿ ಮಾಡಿಸಿರುವ ಮತ್ತು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರುವ ರೈತ ಫಲಾನುಭವಿಗಳಿಗೆ ಮಾತ್ರ ಆಗುತ್ತದೆ. ಈ ಯೋಜನೆಯಡಿ ರೈತ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಇಂದು ಕೊನೆಯ ದಿನವಾಗಿದೆ.
ಪಿ.ಎಂ. ಕಿಸಾನ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ. ರೈತರು ಈ ಅಪ್ಲಿಕೇಶನನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು ಇ-ಕೆವೈಸಿ ಮಾಡಿಕೊಳ್ಳಬಹುದು. ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸೇವಾ ಸಿಂಧು ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.